Breaking News
Home / ರಾಜಕೀಯ / ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.

ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.

Spread the love

ಬಳ್ಳಾರಿ: ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ.

ಕೊರೊನಾ ದೂರವಾಗಲಿ ಅಂಥಾ ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ ಆಚೆ ಚೆಲ್ಲಿ ಬಂದಿದ್ದಾರೆ. ಗ್ರಾಮದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಳ್ಳಿ ಜನತೆ ಮೂಢನಂಬಿಕೆ ಕಡೆ ಮುಖ ಮಾಡಿದ್ದಾರೆ.

ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ಪ್ರತಿ ಮನೆಯಲ್ಲಿ 5 ಕೆ.ಜಿ ಅನ್ನ ಮಾಡಿ ಒಂದು ಕಡೆ ಸಂಗ್ರಹ ಮಾಡುತ್ತಾರೆ. ಬಳಿಕ ಗ್ರಾಮದ ಹೊರಭಾಗದಲ್ಲಿ ಹೋಗಿ ನೆಲಕ್ಕೆ ಸುರಿದು ಬಂದಿದ್ದಾರೆ. ಒಂದು ಕಡೆ ತುತ್ತು ಅನ್ನಕ್ಕಾಗಿ ಪರದಾಡುವ ಜನ, ಮತ್ತೊಂದು ಕಡೆ ಮೂಢನಂಬಿಕೆಯಿಂದ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ