Breaking News

ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ.?

Spread the love

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್ ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ಡೌನ್ ಜಾರಿ ಮಾಡಿದ ನಂತರ ಕೊರೋನಾ ಸಂಕು ಇಳಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಮೇ 24 ರಿಂದ ಜೂನ್ 7 ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ಕಠಿಣ ನಿರ್ಬಂಧ ಜಾರಿಗೊಳಿಸಿದೆ. ಜೂನ್ 7 ರ ನಂತರವೂ ಲಾಕ್ ಡೌನ್ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ನಂತರವೂ ಲಾಕ್ಡೌನ್ ಮುಂದುವರೆಸುವ ಬಗ್ಗೆ ಸಚಿವರು, ಅಧಿಕಾರಿಗಳು ಸಿಎಂ ನೇತೃತ್ವದ ಸಭೆಯಲ್ಲಿ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಜೂನ್ 5 ರಂದು ಸಭೆ ನಡೆಸಿ ಇನ್ನಷ್ಟು ದಿನ ಲಾಕ್ಡೌನ್ ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2000, ಬೆಂಗಳೂರಿನಲ್ಲಿ 500 ಕ್ಕೆ ಇಳಿಯುವ ಟಾರ್ಗೆಟ್ ರೀಚ್ ಆಗುವವರೆಗೂ ಲಾಕ್ ಡೌನ್ ಮಾಡಲಾಗುವುದು. ಅನ್ ಲಾಕ್ ಪ್ರಕ್ರಿಯೆ ಆರಂಭವಾದರೂ, ಪೂರ್ಣ ಪ್ರಮಾಣದಲ್ಲಿ ವಾಣಿಜ್ಯ ಚಟುವಟಿಕೆ, ಕೈಗಾರಿಕೆಗಳ ಓಪನ್ ಬೇಡ. ಅಲ್ಲದೇ, ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ