Breaking News

ರೈತರ ಹೋರಾಟಕ್ಕೆ 6 ತಿಂಗಳು: ಬೇಡಿಕೆ ಈಡೇರಿಸಿ, ಕಾಯಿದೆಗಳನ್ನು ವಾಪಸ್ ಪಡೆಯಲು ಸಿದ್ದು ಆಗ್ರಹ

Spread the love

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದ್ದು ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಿರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿಯವರ ಸರ್ಕಾರ ಜಾರಿಗೆ ತಂದು ಒಂದು ವರ್ಷವಾಗುತ್ತಿದೆ.

ಪ್ರತಿಭಟನೆಯ ಸ್ಥಳದಲ್ಲಿ ಸುಮಾರು 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಇವರನ್ನು ಮೋದಿಯವರ ಸರ್ಕಾರವೇ ಕೊಂದಿದೆ ಎಂದು ಜನರು ಭಾವಿಸುತ್ತಿದ್ದಾರೆ. ಜಗತ್ತಿನ ಇತಿಹಾಸದಲ್ಲಿ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ.

ಆದರೆ ನಮ್ಮ ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿಯವರ ಸರ್ಕಾರ ಜನರ/ ರೈತರ ಹೋರಾಟವನ್ನು ತೀವ್ರವಾಗಿ ನಿರ್ಲಕ್ಷಿಸಿತು. ದಮನಿಸಲು ಪ್ರಯತ್ನಿಸಿತು. ಅತ್ಯಂತ ಅಮಾನುಷವಾಗಿ ವರ್ತಿಸಿತು. ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ನೇರವಾಗಿ ಸಂಬಂಧವಿರುವವರು. ಅಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿಯವರ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ