Breaking News

ಸೆಖೆಯಾಗ್ತಿದೆ ಎಂದು ಮನೆಯ ಹೊರಗೆ ಹೋದವ ಶವವಾಗಿ ಪತ್ತೆ! ಬೆಚ್ಚಿಬೀಳಿಸುತ್ತೆ ನಿನ್ನೆ ರಾತ್ರಿಯ ಘಟನೆ

Spread the love

ರಾಯಚೂರು: ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ.

ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ ಹೊತ್ತು ಕುಳಿತ್ತಿದ್ದ ಎನ್ನಲಾಗಿದೆ. ಆದರೆ ಆ ರಾತ್ರಿಯೇ ಮನೆ ಬಾಗಿಲ ಸಮೀಪದಲ್ಲೇ ಕಿಡಿಗೇಡಿಗಳು ಆತನ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದ ಸ್ಥಳಕ್ಕೆ ಬಂದ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ