Breaking News

ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು: ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ

Spread the love

ಗೋಕಾಕ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸೋಯಾಬಿನ ಬಿತ್ತನೆ ಮಾಡಲು ಜೂನ ಮೊದಲನೆಯ ವಾರದಿಂದ ಜುಲೈ 2ನೇ ವಾರದವರೆಗೆ ಅವಕಾಶ ಇದ್ದು ಸಾಕಷ್ಠು ಮಳೆಯಾಗಿ ಭೂಮಿ ಹಸಿಯಾದ ನಂತರ ಸೋಯಾಬಿನ್ ಬಿತ್ತನೆ ಮಾಡಬೇಕು ಅಲ್ಲದೆ ನೀರಾವರಿ ಪ್ರದೇಶದಲ್ಲಿ ಬಿತ್ತಣೆ ಮಾಡುವವರು, ಭೂಮಿಗೆ ಮೊದಲು ನೀರು ಹಾಯಿಸಿ ನಂತರ ಬಿತ್ತನೆ ಮಾಡುವುದು ಸೂಕ್ತವಾಗಿರುತ್ತದೆ ಸದ್ಯಕ್ಕೆ ಬಿಸಿಲಿನಿಂದ ಕೂಡಿದ ವಾತಾವರಣ ಇದ್ದು ಇದು ಸೋಯಾಬಿನ ಬಿತ್ತಣೆಗೆ ಸೂಕ್ತವಾಗಿರುವುದಿಲ್ಲವೆಂದು ತಿಳಿಸಿದ್ದಾರೆ.

ಗೋಕಾಕ ತಾಲೂಕಿನ ಕುಂದರನಾಡು (ಅಂಕಲಗಿ) ಭಾಗದಲ್ಲಿ ಅಲ್ಪ ಮಳೆಯಾಗಿದ್ದು ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಸೋಯಾಬಿನ ಬಿತ್ತುವ ರೈತರಿಗೆ ಮಳೆಯ ಅವಶ್ಯಕತೆ ಇದೆ ಭೂಮಿಯಲ್ಲಿ ತೇವಾಂಶ ಕಡಿಮೆ ಇದ್ದಾಗ ಮತ್ತು ಸದ್ಯದ ವಾತಾವರಣದಲ್ಲಿ ಸೋಯಾಬಿನ ಬಿತ್ತುವುದರಿಂದ ಮೊಳಕೆ ಪ್ರಮಾಣ ಕಡಿಮೆ ಬರುತ್ತದೆ ಅಲ್ಲದೇ ರೈತರು ಸೋಯಾಬಿನ ಬೀಜವನ್ನು 2 ಇಂಚಿಗಿಂತ ಹೆಚ್ಚಿನ ಆಳದಲ್ಲಿ ಬಿತ್ತನೆ ಮಾಡಿದರೂ ಸಹ ಮೋಳಕೆ ಪ್ರಮಾಣ ಕಡಿಮೆ ಬರುತ್ತದೆ ಆದ್ದರಿಂದ ರೈತರು ಮಣ್ಣಿನ ತೇವಾಂಶ ನೋಡಿಕೊಂಡು ಬಿತ್ತಣೆ ಮಾಡುವಂತೆ ರೈತರಿಗೆ ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ