Breaking News

ಸಿ.ಪಿ.ಯೋಗೇಶ್ವರ್ ಅವರನ್ನು ವಜಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಯಡಿಯೂರಪ್ಪನವರಿಗಿಲ್ಲ:ಯತ್ನಾಳ್

Spread the love

ವಿಜಯಪುರ: ರಾಜ್ಯದಲ್ಲಿರುವುದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಸರ್ಕಾರವಲ್ಲ, ಬಿ.ವೈ.ವಿಜಯೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕೆಂಡಕಾರಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪನವರು ದೆಹಲಿಗೆ ಹೋಗಬೇಕಿತ್ತು. ಆದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿರುವುದು ಬಿಎಸ್ ವೈ ಸರ್ಕಾರವಲ್ಲ, ವಿಜಯೇಂದ್ರ ಸರ್ಕಾರ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದರು.

ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ವಜಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಯಡಿಯೂರಪ್ಪನವರಿಗಿಲ್ಲ. ಹಾಗೆ ಮಾಡಿದರೆ ಒಂದೇ ಗಂಟೆಯಲ್ಲಿ ರಾಜೀನಾಮೆ ಕೊಡಬೇಕಾಗುತ್ತದೆ. ರಮೇಶ್ ಜಾರಕಿಹೊಳಿ ಪ್ರಕರಣದಂತೆಯೇ ಇದೂ ಕೂಡ ಆಗುತ್ತದೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ