Breaking News

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದ ಸಿಎಂ B.S.Y.

Spread the love

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಉತ್ತರಿಸಿದರು.

ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಲಾಕ್‍ಡೌನ್‍ನಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ. ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡುತ್ತೇವೆ. ಕೆಲವೊಂದಕ್ಕೆ ಮಾತ್ರ ವಿನಾಯಿತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ರಫ್ತು ಆಧಾರಿತ ಸೇವೆ ನಾಳೆಯಿಂದ ಆರಂಭವಾಗಲಿದೆ. ಲಾಕ್ ಡೌನ್ ಸಡಿಲ ಹೇಗೆ ಮಾಡಬೇಕು ಎನ್ನುವುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ವಿಸ್ತರಣೆ ಮಾಡಿ ಬಿಗಿ ಕ್ರಮ ತೆಗೆದುಕೊಂಡು ಹೇಗೆ ಹೋಗಬೇಕು ಎಂಬುದರ ಬಗ್ಗೆ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಲಾಕ್‍ಡೌನ್ ಎಷ್ಟು ದಿನ ವಿಸ್ತರಣೆಯಾಗಲಿದೆ ಎಂಬುದನ್ನು ಸಿಎಂ ತಿಳಿಸಿಲ್ಲ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ