Breaking News

ದರೋಡೆಗೆ ಸಂಚು: ಐದು ಮಂದಿ ಬಂಧನ

Spread the love

ಬೆಂಗಳೂರು: ಸಾರ್ವಜನಿಕರನ್ನು ಬೆದರಿಸಿ, ದರೋಡೆಗೆ ಸಂಚು ರೂಪಿಸಿದ್ದ ಆರೋಪದಡಿ ಕುಖ್ಯಾತ ರೌಡಿಗಳ ಸಹಚರರಾದ ಐದು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತಸ್ಲೀಂ ಪಾಷಾ (38), ಶೇಖ್ ತನ್ವರ್‌ (21), ಮಹಮದ್ ಸುಲ್ತಾನ್ (23), ಸೈಯದ್‌ ಫೈರೋಜ್‌ (32) ಹಾಗೂ ಇಮ್ರಾನ್ ಪಾಷಾ (34) ಬಂಧಿತರು.

‘ಇವರು ವಿವೇಕನಗರ ಠಾಣಾ ವ್ಯಾಪ್ತಿಯ ಇನ್ಫೆಂಟ್ ಜೀಸಸ್ ಚರ್ಚ್‌ ಸಮೀಪದ ದಾರಿಯಲ್ಲಿ ಒಂಟಿಯಾಗಿ ಬರುವವರ ಮೇಲೆ ಹಲ್ಲೆ ನಡೆಸಿ, ನಗದು-ಚಿನ್ನಾಭರಣ ದೋಚಲು ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿದ್ದರು. ಈ ವೇಳೆ ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ತಸ್ಲೀಂ ಪಾಷಾ ಹಾಗೂ ಸೈಯದ್‌ ಫೈರೋಜ್‌ ಅಶೋಕನಗರ ಠಾಣೆಯ ರೌಡಿಶೀಟರ್‌ಗಳಾಗಿದ್ದು, ತಸ್ಲೀಂ ವಿರುದ್ಧ ಕೊಲೆ ಸೇರಿದಂತೆ 15 ಪ್ರಕರಣಗಳು ದಾಖಲಾಗಿವೆ. ಮಹಮದ್ ಸುಲ್ತಾನ್ ಕಬ್ಬನ್‌ಪಾರ್ಕ್‌ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ಮೇಲೂ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳಿವೆ. ಬಂಧಿತರೆಲ್ಲರೂ ಎಸ್‌.ಆರ್.ನಗರ, ಬಿಟಿಎಂ ಬಡಾವಣೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಕುಖ್ಯಾತ ರೌಡಿ ಶಹನವಾಜ್ ಹಾಗೂ ಅಶೋಕನಗರದ ರೌಡಿ ಹೈದರ್‌ನ ಸಹಚರರು’ ಎಂದೂ ಹೇಳಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ