Breaking News

ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

Spread the love

ಬೆಳಗಾವಿ: ಮದುವೆ ಬಳಿಕವೂ ಪ್ರೀತಿ​ ಮುಂದುವರಿಸಿದ್ದ ಜೋಡಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಒಂದೇ ಮರಕ್ಕೆ ಅಕ್ಕಪಕ್ಕ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಪಂಚಪ್ಪ ಕಣವಿ (25 ವ) ಹಾಗೂ ಸಕ್ಕೂಬಾಯಿ ಕರಿಗಾರ (23 ವ) ಮೃತ ಪ್ರೇಮಿಗಳು.

ಪಂಚಪ್ಪ ಹಾಗೂ ಸಕ್ಕೂಬಾಯಿ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಉಭಯ ಕುಟುಂಬಸ್ಥರು ಅವಕಾಶ ನೀಡದ್ದಕ್ಕೆ ನಾಲ್ಕು ವರ್ಷಗಳ ಹಿಂದೆ ಪಂಚಪ್ಪ ಬೇರೆ ಯುವತಿಯೊಂದಿಗೆ ವಾಹವಾಗಿದ್ದನು. ವಿವಾಹವಾದರೂ ಸಕ್ಕೂಬಾಯಿಯೊಂದಿಗೆ ಸಲುಗೆಯಿಂದ‌ ಇದ್ದನು. ಈ ಪ್ರೀತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಕಳೆದ‌ ತಿಂಗಳವಷ್ಟೇ ಸಕ್ಕೂಬಾಯಿಗೆ ಬೇರೆ ಯುವಕನೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು. ಆದರ ಮದುವೆ ಬಳಿಕವೂ ಪತಿ ಮನೆಗೆ ಹೋಗಲು ಸಕ್ಕೂಬಾಯಿಗೆ ಇಷ್ಟ ಇರಲಿಲ್ಲ. ಪಂಚಪ್ಪ ಹಾಗೂ ಸಕ್ಕೂಬಾಯಿ ಮದುವೆ ನಂತರವೂ ತಮ್ಮ ಪ್ರೀತಿ ಮುಂದುವರಿಸಿದ್ದರು. ಗಂಡನ ಮನೆಗೆ ಹೋದರೆ ನಾವಿಬ್ಬರೂ ಬೇರೆ ಆಗುತ್ತೇವೆ ಎಂಬ ಭಯದಿಂದ ಇಬ್ಬರೂ ಒಂದೇ ಗಿಡಕ್ಕೆ ಒಂದೇ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಎರಡೂ ಕುಟುಂಬಸ್ಥರು ಬಂದು ಹೌಹಾರಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ