Breaking News

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ.

Spread the love

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ನಾನು ಯಾವುದೇ ಗೊಂದಲದಲ್ಲಿ ಇಲ್ಲ. ನನಗೆ ಹೈಕಮಾಂಡ್ ಅಧಿಕಾರ ನಡೆಸಲು ಅವಕಾಶಕೊಟ್ಟಿದೆ. ಆ ನಿಟ್ಟಿನಲ್ಲಿ ಶಕ್ತಿ ಮೀರಿ ರಾಜ್ಯದ ಅಭಿವೃದ್ಧಿ, ಜನರ ಏಳಿಗಾಗಿ ನಾನು ಕೆಲಸ ಮಾಡುತ್ತೇನೆ. ಯಾವಾಗ ಹೈಕಮಾಂಡ್ ರಾಜೀನಾಮೆಗೆ ಸೂಚಿಸುತ್ತೋ ತಕ್ಷಣ ರಾಜೀನಾಮೆ ನೀಡುತ್ತೇನೆ. ಇನ್ನು ಪರ್ಯಾಯ ನಾಯಕರು ಇಲ್ಲ ಎಂಬ ಮಾತನ್ನು ನಾನು ಒಪ್ಪಲ್ಲ ಎಂದು ಹೇಳಿದರು.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ