ಬೆಲೆ ಏರಿಕೆ ವಿರೋಧಿಸಿ ಒಲೆ ಹೊತ್ತಿಸಿ ಪ್ರತಿಭಟನೆ.
ಗ್ಯಾಸ್ ಸಿಲಿಂಡರ್ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹತ್ತಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.
ಕೇಂದ್ರ ಬಿಜೆಪಿ ಸರಕಾರವು ಹೊಸ ವರ್ಷಕ್ಕೆ ದೇಶದ ಬಡವರಿಗೆ, ರೈತರಿಗೆ, ಮಹಿಳೆಯರಿಗೆ, ಪೆಟ್ರೋಲ್, ಡಿಸೇಲ್ , ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿ ಜನರಿಗೆ ಬೆಲೆ ಬಿಸಿ ಕೊಡುಗೆ ಕೊಟ್ಟಿದ್ದು, ಕೂಡಲೇ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಜನಸಾಮಾನ್ಯರ ಹೊರೆ ತಗ್ಗಿಸಬೇಕು ಎಂದು ಒತ್ತಾಯಿಸಿರು.