Breaking News

ಕೊರೊನಾ ಸೋಂಕಿಗೆ ಕಣ್ಮರೆಯಾದ ವಿದ್ಯಾಧರ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ

Spread the love

ಬೆಳಗಾವಿ: ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ ಡಾ.ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕೊರೊನಾ ಸೊಂಕಿಗೆ ತುತ್ತಾಗಿದ್ದು, ಇಹಲೋಕತ್ಯಜಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಆಧ್ಯಾತ್ಮ ಪರಂಪರೆ ಜಗತ್ತಿನಲ್ಲಿಯೇ ಅನನ್ಯವಾದದ್ದು. ಮಠ-ಮಂದಿರಗಳು, ಸ್ವಾಮಿಗಳು ಈ ನಾಡಿನ ಜೀವ-ಜೀವಾಳ. ಅದರಲ್ಲೂ ವಿದ್ಯದ ಸ್ವಾಮಿಗಳು ಅಂದರೆ ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ ಡಾ. ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು. ಈ ನಾಡು ಕಂಡಂತಹ ಅಪರೂಪದ ಸ್ವಾಮಿಗಳು.ಇದೀಗ ಕೊವೀಡ್ ದಿಂದ ಲಿಂಗೈಕ್ಯರಾದದ್ದು ತಿಳಿದು ಬೇಸರ, ನೋವು ತರಿಸಿತು. ನಮ್ಮ ನಡುವಿನ ವಿದ್ಯಾವಿಶಾರದೆ ಅಂತೆ ಇದ್ದರು. ಸರ್ವಜನಾಂಗ ಮತ್ತು ಸರ್ವಧರ್ಮವನ್ನು ಪ್ರೀತಿ ಮಾಡುವಂತಹ ಮಾಡಿದ ವಿಶಾಲ ಹೃದಯ ವಂತರಾಗಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ