Breaking News

ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್

Spread the love

ಬೆಂಗಳೂರು : ಫೇಸ್ ಬುಕ್ ಲೈವ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್.

ಇಂದು ಅವರು, ಮಹಾಮಾರಿ ಕೋವಿಡ್ ವೈರಸ್​ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ ಪಾಪಪ್ರಜ್ಞೆ ಇಲ್ಲವೇ? ವೋಟ್​ ಹಾಕಿದ ನಮಗೆ ಬೆಲೆ ಇಲ್ವಾ? ನಾವು ಮೋದಿ ಮುಖ ನೋಡಿಕೊಂಡು ವೋಟ್​ ಹಾಕಿದ್ವಿ. ನಿಮ್ಮ ಸ್ವಂತ ಆಸ್ತಿಗಳನ್ನು ಘೋಷಣೆ ಮಾಡಿ ಎಂದು ಸವಾಲು ಹಾಕಿದ್ದಾರೆ.

29 ಸಾವಿರ ಕನ್ನಡಿಗರು ಸತ್ತಿದ್ದಾರೆ. ಅವರೆಲ್ಲರಿಗೂ ಒಂದೊಂದು ಕೋಟಿ ರೂಪಾಯಿ ಕೊಡಿ. ಅಷ್ಟು ಕನ್ನಡಿಗರನ್ನು ಸಾಯಿಸಿದ್ದೀರಲ್ಲ ನಿಮಗೆ ಪ್ರಾಯಶ್ಚಿತ್ತ ಇಲ್ಲವೇ? ಅದು ಹೇಗೆ ಊಟ ಮಾಡುತ್ತೀರಿ? ನೀವೆಲ್ಲ ಭ್ರಷ್ಟಾಚಾರಿಗಳು. ಅದನ್ನು ನಾನು ಕೋರ್ಟ್​ನಲ್ಲಿ ಸಾಬೀತು ಮಾಡುತ್ತೇನೆ. ಅದಕ್ಕೆ ನನ್ನ ಬಳಿ ಸಾಕ್ಷಿ ಇದೆ’ ಎಂದು ಗುರುಪ್ರಸಾದ್​ ಹೇಳಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ