Breaking News

2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್​.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ

Spread the love

ಬೆಂಗಳೂರು: ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ.

ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್​​ಡಿಕೆ ಮತ್ತೆ ರಾಜ್ಯದ ಸಿಎಂ ಆಗುತ್ತಾರೆ. ಮುಂಬರುವ ಪಂಚಮಾಧಿಪತಿ ದೆಸೆಯಲ್ಲಿ ಅಧಿಕಾರ ನಿಶ್ಚಿತ” ಎಂದು ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.


Spread the love

About Laxminews 24x7

Check Also

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ:ಸತೀಶ ಜಾರಕಿಹೊಳಿ..

Spread the loveಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ ನೆರವೇರಿಸಿ, ಸಾಧನಾಶೀಲ ಮಕ್ಕಳಿಗೆ ಪ್ರಶಸ್ತಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ