Breaking News

ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

Spread the love

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದಾರೆ. ಈ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕಾರಣ ಎಂದು ಆರೋಪಿಸಿದರು.

ಅದೆಂತದೋ ಸಿಂಹ, ಎಂಥಾ ಸಿಂಹ.. ಪ್ರತಾಪ ಸಿಂಹ ಮೊದಲು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಸಪೋರ್ಟ್ ಮಾಡುತ್ತಿದ್ದರು, ಆಮೇಲೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್‍ಗೆ ಸಪೋರ್ಟ್ ಮಾಡೋಕೆ ಶುರು ಮಾಡಿದರು. ಬಿಜೆಪಿ ಜನಪ್ರತಿನಿಧಿಗಳಿಂದಲೇ ಈ ಗಲಾಟೆ ನಡೆಯಿತು ಎಂದು ದೂರಿದರು.

ಐಎಎಸ್ ಅಧಿಕಾರಿಗಳಿಗೆ ಸುದ್ದಿಗೋಷ್ಠಿ ಮಾಡಲು ಅಧಿಕಾರ ಕೊಟ್ಟವರು ಯಾರು? ರೋಹಿಣಿ ಸಿಂಧೂರಿ ಜಮೀನು ಒತ್ತುವರಿ ತಡೆಯೋಕೆ ಹೋಗಿದ್ದಕ್ಕೆ ಹೀಗಾಯ್ತು ಅಂದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು. ಬಿಜೆಪಿ ಜನಪ್ರತಿನಿಧಿಗಳಿಗೆ ರೋಹಿಣಿ ಸಿಂಧೂರಿ ತಗೆಯಬೇಕು, ಶಿಲ್ಪಾ ನಾಗ್ ಅವರಿಗೆ ಡಿಸಿ ಸ್ಥಾನ ಕೊಡಿಸಬೇಕು ಅನ್ನೋದಿತ್ತು. ಅಧಿಕಾರಿಗಳನ್ನು ಹೊಗಳುವುದು, ತೆಗಳುವುದು ಜನಪ್ರತಿನಿಧಿಗಳ ಕೆಲಸವಲ್ಲ. ಜನರ ಕೆಲಸ ಮಾಡುವುದು ಜನ ಪ್ರತಿನಿಧಿಗಳ ಕೆಲಸ. ಎಲ್ಲಾ ಬೆಳವಣಿಗೆಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ