Breaking News

ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ.

ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ ಪ್ರಮಾಣವು ಶೇ 7.53 ರಷ್ಟು ವರದಿಯಾಗಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 27.17 ಲಕ್ಷ ದಾಟಿದೆ.

ರಾಜ್ಯದಲ್ಲಿ ಕೋವಿಡ್‌ ಮೃತರ ಸಂಖ್ಯೆ ದಿಢೀರ್‌ ಇಳಿಕೆ ಕಂಡಿದೆ. ಮಂಗಳವಾರ 179 ಮಂದಿ ಮೃತಪಟ್ಟಿದ್ದು, ಮರಣ ಪ್ರಮಾಣ ದರ ಶೇ 1.85ಕ್ಕೆ ಕುಸಿ ದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2.25 ಲಕ್ಷಕ್ಕೆ ಇಳಿದಿದೆ.

ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಬಹುತೇಕ ಜಿಲ್ಲೆಗಳಲ್ಲಿ ಇಳಿಮುಖ ಕಂಡಿದೆ. ಬೆಂಗಳೂರಿನಲ್ಲಿ ಹೊಸದಾಗಿ 2,028 ಮಂದಿ ಸೋಂಕಿತರಾಗಿದ್ದಾರೆ. ಮೈಸೂರು (974), ಶಿವಮೊಗ್ಗ (703) ಹಾಗೂ ತುಮಕೂರಿನಲ್ಲೂ (589) ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಏಳು ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿದಿದೆ.

ಬೆಂಗಳೂರಿನಲ್ಲಿ 44 ಮಂದಿ ಮೃತಪಟ್ಟಿದ್ದಾರೆ. ಸೋಮವಾರಕ್ಕೆ (199) ಹೋಲಿಸಿದರೆ ಇದು ನಾಲ್ಕು ಪಟ್ಟು ಕಡಿಮೆ. ಹಾವೇರಿ (11), ಮೈಸೂರು (15) ಹಾಗೂ ಶಿವಮೊಗ್ಗ (10) ಬಿಟ್ಟು ಉಳಿದೆಲ್ಲಾ ಜಿಲ್ಲೆಗಳಲ್ಲೂ ಮೃತರ ಸಂಖ್ಯೆ ಒಂದಂಕಿಗೆ ತಲುಪಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ