Breaking News

ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್‌

Spread the love

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್‌ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್‌ ಗುಪ್ತ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್‌ಲಾಕ್‌ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಹೆಚ್ಚಿನವೈದ್ಯರು ಮತ್ತು ವೈದ್ಯ ಕೀಯ ಸಿಬ್ಬಂದಿಗಳನ್ನುನಿಯೋಜಿಸಲಾಗಿತ್ತು.ಅದೇ ವ್ಯವಸ್ಥೆಯನ್ನು ಮೂರನೇ ಅಲೆಗೂಮುಂದುವರಿಸುತ್ತೇವೆ. ಅಗತ್ಯವಿದ್ದರೆ ಇನ್ನಷ್ಟು ವೈದ್ಯರುಮತ್ತು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ ಎಂದುಪಾಲಿಕೆ ಸಿದ್ಧತೆ ಬಗ್ಗೆ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ