Breaking News

ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

Spread the love

ಬೆಳಗಾವಿ: ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ.

ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್​ ಖಾಸಗಿ ಯೂಟ್ಯೂಬ್ ಚಾನಲ್‌ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಕೇಸ್ ಆರೋಪಿಗಳ ಪತ್ತೆಗಾಗಿ ಎಸ್​ಪಿ ಲಕ್ಷ್ಮಣ್​ ನಿಂಬರಗಿ ಡಿವೈಎಸ್​ಪಿ ನೇತೃತ್ವದ ತಂಡ ರಚನೆ ಮಾಡಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ