Breaking News
Home / ಜಿಲ್ಲೆ / ಬೆಂಗಳೂರು / ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ ಮೇಲ್ ಸೇರಿದಂತೆ ದೂರು ದಾಖಲಿಸಿದ್ದರು.

ಸಿಡಿ ಕೇಸ್ ನಲ್ಲಿ ಬಂಧನ ಭೀತಿಯಲ್ಲಿದ್ದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದ್ದ ನ್ಯಾಯಾಲಯ 5 ದಿನಗಳಲ್ಲಿ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ