Breaking News

ಕೊರೊನಾದಿಂದ ಸಾವನ್ನಪ್ಪಿದ ತಂದೆಯ ಅಂತ್ಯಕ್ರಿಯೆ ಮಾಡಿದ ಪುತ್ರಿಯರು

Spread the love

ದಾವಣಗೆರೆ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹವನ್ನು ಕುಟುಂಬಸ್ಥರು ಅಂಬುಲೆನ್ಸ್ ನಲ್ಲೇ ಬಿಟ್ಟುಹೋಗುವ ಪ್ರಕರಣಗಳನ್ನು ನೋಡಿದ್ದೇವೆ. ಕೆಲವರು ಅಪ್ಪನ ಹಣ ಬೇಕು, ಅಪ್ಪ ಬೇಡ ಎಂದವರೂ ಇದ್ದಾರೆ. ಇಂತಹವರ ಮಧ್ಯೆ ಕೋವಿಡ್ ನಿಂದ ಮೃತರಾದ ತಂದೆಯ ಶವದ ಅಂತ್ಯಕ್ರಿಯೆಯನ್ನು ಇಬ್ಬರು ಹೆಣ್ಣುಮಕ್ಕಳು ಮಾಡಿ ಜವಾಬ್ದಾರಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಗಾಂಧಿ ವೃತ್ತದಲ್ಲಿರುವ ಶಾಸ್ತ್ರೀ ಬೇಕರಿ ಮಾಲೀಕರಾದ ಶ್ರೀಕಂಠ ಅವರು ಕೋವಿಡ್ ನಿಂದ ಬಾಪೂಜಿ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಅವರ ಇಬ್ಬರು ಹೆಣ್ಣು ಮಕ್ಕಳು, 12 ದಿನ ಕೋವಿಡ್ ಸೆಂಟರ್ ನಲ್ಲಿ ತಂದೆಯ ಆರೈಕೆ ಮಾಡಿ, ನಿಧನದ ನಂತರ ದೇಹವನ್ನು ಅವರೇ ಅಂಬುಲೆನ್ಸ್ ಮೂಲಕ ಮನೆಯ ಹತ್ತಿರ ತೆಗೆದುಕೊಂಡು ಹೋಗಿ, ತಾಯಿ, ಅಜ್ಜಿ ಕಡೆಯಿಂದ ಪೂಜೆ ಮಾಡಿಸಿ, ನಂತರ ತಂದೆಯ ಶವಕ್ಕೆ ಆಗ್ನಿ ಸ್ಪರ್ಶ ಮಾಡಿ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ.

ಕೊರೊನಾ ರೋಗಿಗಳನ್ನು ಕುಟುಂಬಸ್ಥರು, ಸ್ನೇಹಿತರು ಎಂಬ ಕನಿಕರ ಇಲ್ಲದೆ, ಮನುಷ್ಯತ್ವ ಮರೆತು ನೋಡುವವರ ಮಧ್ಯೆ 17, 18 ವರ್ಷದ ಈ ಇಬ್ಬರು ಹೆಣ್ಣುಮಕ್ಕಳು ಧೈರ್ಯವಾಗಿ ಯಾವುದೇ ಆಳುಕಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಕಾಯ್ದಿರಿಸಿದ ಹೈಕೋರ್ಟ್​

Spread the loveಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್​ಐಆರ್​ ಪ್ರಶ್ನಿಸಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ