Breaking News

ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.

Spread the love

ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರು ಭಾಗಿಯಾಗಿರುವುದು ಕಂಡು ಬಂದಿರುತ್ತದೆ. ವಿದೇಶಗಳಿಂದ ಅಕ್ರಮವಾಗಿ ಬಂದು ಇಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕೆಲವರು ಇಲ್ಲಿ ಆಧಾರ್ ಕಾರ್ಡ್ ಕೂಡ ಮಾಡಿಸಿಕೊಂಡಿರುವುದು ಕೂಡ ತಿಳಿದು ಬಂದಿದೆ. ಅಲ್ಲದೇ ಪೊಲೀಸರು ಮಾನವ ಕಳ್ಳಸಾಗಣೆ ಪ್ರಕರಣಳನ್ನು ಕೂಡ ಪತ್ತೆ ಹಚ್ಚಿದ್ದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ