Breaking News

ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು

Spread the love

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ.

ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ ಬೇಸತ್ತ ಅನೇಕರು ರಾಜೀನಾಮೆ ನೀಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಹೆಚ್.ಡಿ. ನಾಗೇಂದ್ರ, ಖಜಾಂಚಿ ಜಗದೀಶ್, ಪ್ರಚಾರ ಸಮಿತಿ ಕಾರ್ಯದರ್ಶಿ ಚೇತನ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.

ಮುಷ್ಕರದಲ್ಲಿ ಭಾಗಿಯಾಗಿದ್ದ ಅನೇಕ ನೌಕರರನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಹಲವರನ್ನು ವರ್ಗಾವಣೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್, ಚಂದ್ರು ಅವರ ಪ್ರತಿಷ್ಠೆಯಿಂದಾಗಿ ಇಂತಹ ಸಮಸ್ಯೆ ಎದುದಾಗಿದೆ ಎಂದು ಹೇಳಲಾಗಿದೆ


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ