Breaking News
Home / ರಾಜಕೀಯ / ASI ಮನೆ ಮೇಲಿನ ಎಸಿಬಿ ದಾಳಿ: ₹6 ಕೋಟಿ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿ

ASI ಮನೆ ಮೇಲಿನ ಎಸಿಬಿ ದಾಳಿ: ₹6 ಕೋಟಿ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿ

Spread the love

ಬೆಂಗಳೂರು: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ ಸಂಬಂಧ ಕೊಡಿಗೇಹಳ್ಳಿ ಎಎಸ್‌ಐ ದಯಾನಂದಸ್ವಾಮಿ ಮನೆ ಮೇಲೆ ನಿನ್ನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕೇವಲ ಐವತ್ತು ಸಾವಿರ ನಗದು ಪತ್ತೆಯಾಗಿದ್ದು, ಅಧಿಕಾರಿಗಳೇ ಶಾಕ್ ಆಗಿದ್ರು. ಆರು ಕೋಟಿ ಮೌಲ್ಯದ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿಯಾಗಿದ್ದು, ದಯಾನಂದಸ್ವಾಮಿ ದಾಳಿಗೂ ಮುನ್ನವೇ ದಾಖಲೆಗಳನ್ನ ಎಸ್ಕೇಪ್ ಮಾಡಿಸಿರುವ ಅನುಮಾನ ಮೂಡಿದೆ.

ಮನೆಯ ದಾಖಲೆಗಳು, ಹಾಗೂ ಕೆಲವು ವಾಹನಗಳ ದಾಖಲೆಗಳು ಮಾತ್ರ ನಿನ್ನೆ ಪತ್ತೆಯಾಗಿದೆ. ಉಳಿದಂತೆ ಬೇರೆನು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಲ್ಲ. ಹೀಗಾಗಿ ದಯಾನಂದಸ್ವಾಮಿ ಬೇನಾಮಿ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

 

ಸದ್ಯ ದಯಾನಂದಸ್ವಾಮಿ ತಲೆಮರೆಸಿಕೊಂಡಿದ್ದು, ಎಸಿಬಿ ಅಧಿಕಾರಿಗಳು ಬೇನಾಮಿ ಆಸ್ತಿ ಬಗ್ಗೆ ‌ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ