Breaking News

ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ

Spread the love

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು ಮಾಡುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಹೀಗಾಗಿ, ಬಿಜೆಪಿ ಹೈಕಮಾಂಡ್‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು. ಈ ಕುರಿತು ಅವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಅಶೋಕಕುಮಾರ ಅಸೋದೆ, ಶಿವಾನಂದ ಚೌಕಸಿ ನೇತೃತ್ವ ವಹಿಸಿದ್ದರು


Spread the love

About Laxminews 24x7

Check Also

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Spread the love ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ