Breaking News

ಮನೆ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ, ಸ್ಥಳೀಯರಲ್ಲಿ ಆತಂಕ

Spread the love

ಹಾಸನ: ಮನೆಯ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ನಡೆದಿದೆ.‌

ತಡರಾತ್ರಿ 2.30ರ ಸಮಯದಲ್ಲಿ ಗ್ರಾಮದೊಳಗೆ ಬಂದಿರುವ ಚಿರತೆ ಗರುಡನಗಿರಿ ರಸ್ತೆಯ ಮಲ್ಲೇಗೌಡ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿದೆ. ಬೆಳಗ್ಗೆ ನಾಯಿ ಕಾಣಿಸದಿದ್ದಾಗ ಮಲ್ಲೇಗೌಡರು ಸಿಸಿಟಿವಿ ಪರಿಶೀಲಿಸಿದ್ದಾರೆ. ಚಿರತೆ ನಾಯಿಯನ್ನು ಹೊತ್ತೊಯ್ಯವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ