Breaking News

ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ

Spread the love

ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಅವರ ಪಕ್ಷದವರೇ ಹೇಳಿಕೆ ನೀಡಿ ದಾಖಲೆ ಬಿಡುಗಡೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡಿತೀದೆ ಎಂದು ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಹೊರಿಸಿದ್ದಾರೆ. ಹಾಗಾಗಿ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ತಿಳಿಸಿ ಸರ್ಕಾರ ವಜಾ ಮಾಡಬೇಕು. ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಲಿ, ಬೆಲ್ಲದ್ ಬಹಿರಂಗವಾಗಿ ಹೇಳಿದ್ದಾರೆ ಎಲ್ಲದರ ತನಿಖೆ ನಡೆಯಬೇಕು ಎಂದಿದ್ದಾರೆ. ಬಳಿಕ ತಮ್ಮ ಬಗ್ಗೆ ಆರೋಪ ಮಾಡಿರುವ ಹೆಚ್. ವಿಶ್ವನಾಥ್ ಕುರಿತು ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ