Breaking News

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜುಲೈ 1 ರಿಂದ ತರಗತಿಗಳು ಆರಂಭ : ಸಚಿವ ಸುರೇಶ್ ಕುಮಾರ್

Spread the love

ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚು ಹೆಚ್ಚು ಮಕ್ಕಳು ಸೇರುತ್ತಿದ್ದಾರೆ. ಕಳೆದ ವರ್ಷ ಒಂದೂವರೆ ಲಕ್ಷದಷ್ಟು ಮಕ್ಕಳು ಸರ್ಕಾರಿ ಶಾಲೆಗೆ ಸೇರಿದ್ದು, ಈ ಬಾರಿಯೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ