Breaking News

ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!

Spread the love

ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ ಸಂಬಂಧ ಹೊಂದಿರುಬಹುದು ಎಂದು ಅನುಮಾನ ಬೆಳೆಸಿಕೊಂಡು ಹೋಗಿದ್ದಾನೆ. ಅದೇ ಶಂಕೆಯಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.

ಮಣಿ ವಿಪರೀತವಾಗಿ ಕುಡಿತದ ವ್ಯಸನಿ ಆಗಿದ್ದಾಗಿ ಹೇಳಲಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ