Breaking News

ಟಿಆರ್‌ಪಿ ಹಗರಣ: ಅರ್ನಬ್ ಆರೋಪಿ

Spread the love

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ.

ಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಇಂಟೆಲಿಜೆನ್ಸ್‌ ಯುನಿಟ್‌ (ಸಿಐಯು) ಈ ಚಾರ್ಜ್‌ಶೀಟನ್ನು ಸಲ್ಲಿಸಿದೆ. ‘ಚಾರ್ಜ್‌ಶೀಟ್‌ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್‌ ಗೋಸ್ವಾಮಿ ಹಾಗೂ ಎಆರ್‌ಜಿ ಔಟ್‌ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ ವಕೀಲರು ತಿಳಿಸಿದ್ದಾರೆ. ನಕಲಿ ಟಿಆರ್‌ಪಿ ಹಗರಣ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂತು. ಕೆಲವು ಚಾನೆಲ್‌ಗಳು ಟಿಆರ್‌ಪಿ ಮಾಹಿತಿಯನ್ನು ತಿರುಚಿವೆ ಎಂದು ಆರೋಪಿಸಿದ್ದ ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ (ಬಿಎಆರ್‌ಸಿ), ಹನ್ಸ ರಿಸರ್ಚ್‌ ಗ್ರೂಪ್ (ಎಚ್‌ಆರ್‌ಜಿ) ಮೂಲಕ ದೂರು ಸಲ್ಲಿಸಿತ್ತು


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ