Breaking News

ಮೋದಿ ಇರುವವರೆಗೂ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ: ಬಿ.ಶ್ರೀರಾಮುಲು

Spread the love

ಚಿತ್ರದುರ್ಗ: ನರೇಂದ್ರ ಮೋದಿ ಅವರು ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ ಆಗಲಿದೆ ಎಂದು ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ. ಸಿದ್ದರಾಮಯ್ಯ ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರನ್ನು ಟೀಕೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಕಳೆದುಕೊಂಡು ಬುದ್ದಿ ಭ್ರಮಣೆ ಆಗಿದೆ. ಕಾಂಗ್ರೆಸ್ ಯಾವತ್ತೂ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲೇ ನಾಯಕತ್ವಕ್ಕೆ ಕಿತ್ತಾಟ ನಡೆಯುತ್ತಿದೆ. ಮುಂದೆ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಜಗಳ ಬಹಿರಂಗವಾಗಿದೆ. ಯಾರು ಕಾಂಗ್ರೆಸ್‌ ನಾಯಕರು ಎಂಬುದನ್ನು ಮೊದಲು ಹೇಳಿ ಎಂದು ಸವಾಲು ಹಾಕಿದರು.


Spread the love

About Laxminews 24x7

Check Also

ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದಸಿದ್ದರಾಮಯ್ಯ

Spread the loveಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಭೇಟಿ ನೀಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ