Breaking News

ಹಳ್ಳಿಯ ಹುಡುಗನಿಗೆ ದೇಶದ ಅತ್ಯುನ್ನತ ಹುದ್ದೆ- ಪ್ರಜಾಪ್ರಭುತ್ವದ ಸೊಬಗು: ಕೋವಿಂದ್‌ ಬಣ್ಣನೆ

Spread the love

ಲಖನೌ: ಹಳ್ಳಿಯೊಂದರ ಹುಡುಗ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಗೌರವ ಸಿಗುತ್ತದೆ ಎಂದು ನಾನು ಊಹಿಸಿರಲಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೊಬಗು ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಹೇಳಿದ್ದಾರೆ.

ರಾಮ್‌ನಾಥ್ ಕೋವಿಂದ್ ಅವರ ಹುಟ್ಟೂರಾದ ಕಾನ್ಪುರದ ದೇಹತ್ ಜಿಲ್ಲೆಯ ಪರೌಂಖ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಇಂದು ನಾನು ಯಾವುದೇ ಸ್ಥಾನಕ್ಕೇರಿದ್ದರೂ ಕೂಡ ಅದರ ಶ್ರೇಯಸ್ಸು ಈ ಹಳ್ಳಿಯ ಮಣ್ಣು, ಈ ಪ್ರದೇಶ ಮತ್ತು ನಿಮ್ಮ ಪ್ರೀತಿ ಮತ್ತು ಆಶೀರ್ವಾದಕ್ಕೆ ಸಲ್ಲುತ್ತದೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ರಚಿಸಿದವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

ಹಳ್ಳಿಯ ಮಣ್ಣಿನ ಪರಿಮಳ ಮತ್ತು ಅಲ್ಲಿನ ಜನರ ನೆನಪುಗಳು ಯಾವಾಗಲೂ ನನ್ನ ಹೃದಯದಲ್ಲಿ ಅಚ್ಚಳಿಯದೆ ಉಳಿದಿವೆ. ನನ್ನ ಪಾಲಿಗೆ ಪರೌಂಖ್ ಎನ್ನುವುದು ಒಂದು ಹಳ್ಳಿ ಮಾತ್ರವಲ್ಲ, ಬದಲಿಗೆ ದೇಶಸೇವೆಯನ್ನು ಮಾಡಲು ನನಗೆ ಸ್ಫೂರ್ತಿ ಸಿಕ್ಕ ‘ಮಾತೃಭೂಮಿ” ಎಂದು ಕೋವಿಂದ್ ಹೇಳಿದರು.

ರಾಷ್ಟ್ರಪತಿ ಅವರು ಭಾನುವಾರ ಬೆಳಿಗ್ಗೆ ಪರೌಂಖ್ ಗ್ರಾಮವನ್ನು ತಲುಪಿದರು, ಅಲ್ಲಿ ಅವರನ್ನು ಉತ್ತರ ಪ್ರದೇಶದ ಗವರ್ನರ್ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು


Spread the love

About Laxminews 24x7

Check Also

ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.

Spread the love ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ