Breaking News
Home / ರಾಜ್ಯ / ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Spread the love

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ.

ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ.

ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ಮಕ್ಕಳನ್ನ ಕಟ್ಟಿಕೊಂಡು ಬಾಲ್ಕಿಗೆ ಹೇಗೆ ಹೋಗಲಿ ಅಂತ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಏಕಾಏಕಿ ವರ್ಗಾವಣೆ ಶಿಕ್ಷೆಗೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮಾರ್ಚ್ ತಿಂಗಳಿನಿಂದ ವೇತನವೂ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಅಂತ ಚಾಲಕ ಸೈಯದ್ ಯೂನೂಸ್ ಆರೋಪಿಸಿದ್ದಾರೆ. ವಿಷಯ ತಿಳಿದು ಕಚೇರಿಗೆ ಬಂದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸಿಬ್ಬಂದಿಯನ್ನ ಸಮಾಧಾನ ಪಡಿಸಲು ಯತ್ನಿಸಿದರು. ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ ನಮ್ಮಿಂದ ಕಿರುಕುಳ ಆಗಿಲ್ಲ ಅಂತ ಡಿವಿಷನಲ್ ಕಂಟ್ರೋಲರ್ ವೆಂಕಟೇಶ್ ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ