Breaking News

ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆ

Spread the love

ರಾಯಚೂರು: ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲಾಗುತ್ತಿದೆ. ಮಕ್ಕಳ ಪೌಷ್ಠಿಕತೆಗೆ, ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೊಟ್ಟೆಗಳನ್ನ ಪೂರೈಕೆ ಮಾಡುತ್ತಿದೆ. ಕಡ್ಡಾಯವಾಗಿ ಪ್ರತಿ ಮಗುವಿಗೂ 60 ಗ್ರಾಂ ತೂಕದ ಮೊಟ್ಟೆ ನೀಡಬೇಕು. ಆದ್ರೆ ರಾಯಚೂರು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಕೇವಲ 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿದ್ಯಂತೆ. ಹೀಗಾಗಿ ಅಂಗನವಾಡಿ ಮಕ್ಕಳಿಗೆ ಪೂರೈಕೆ ಆಗ್ತಿರೋ ಮೊಟ್ಟೆಯಲ್ಲೂ ಹಣ ಲೂಟಿ ಮಾಡ್ತಿದ್ದಾರೆ ಅಂತಾ ಜನ ಆಕ್ರೋಶ ಹೊರ ಹಾಕ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಸಿಇಒಗೆ ಸ್ಥಳೀಯರು ದೂರು ಸಲ್ಲಿಸಿದ್ದಾರೆ.

ಇನ್ನು, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ತಾಂಡವಾಡ್ತಿದ್ದ ಮಕ್ಕಳ ಅಪೌಷ್ಠಿಕತೆ ಬಗ್ಗೆ . ಆದ್ರೆ ಈಗ ಅಪೌಷ್ಠಿಕ ಮಕ್ಕಳಿಗೆ ಪೂರೈಕೆ ಮಾಡುವ ಮೊಟ್ಟೆ ಪೂರೈಕೆ ಸ್ಕೀಮ್ನಲ್ಲೂ ಅಕ್ರಮ ನಡೀತಿದ್ಯಂತೆ. ಅದು ಕೂಡ ಜಿಲ್ಲೆಯಾದ್ಯಂತ ಒಂದು ಕೋಟಿ 30 ಲಕ್ಷಕ್ಕೂ ಅಧಿಕ ಮೌಲ್ಯದ ಕಳಪೆ ಗುಣಮಟ್ಟದ ಮೊಟ್ಟೆಗಳನ್ನ ಪೂರೈಕೆ ಮಾಡಿ ಭಾರಿ ಅಕ್ರಮ ಮಾಡ್ಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಾಯಚೂರು ಜಿಲ್ಲಾ ಪಂಚಾಯಿತಿ ಕೂಡ ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆದೇಶಿಸಿದೆ. ಮಾಜಿ ಪುರಸಭೆ ಸದಸ್ಯರು ಕೂಡ ಸೂಕ್ತ ತನಿಖೆ ಆಗ್ಲೇಬೇಕು ಅಂತಾ ಆಗ್ರಹಿಸ್ತಿದ್ದಾರೆ.

ಮೊಟ್ಟೆ ಹಿಡಿದಿರುವ ಮಕ್ಕಳು

ಒಟ್ನಲ್ಲಿ, ರಾಯಚೂರು ಜಿಲ್ಲೆಯಾದ್ಯಂತ ಸರಬರಾಜು ಮಾಡಲಾದ ಮೊಟ್ಟೆಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಅನ್ನೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಇನ್ನಾದ್ರೂ ಸರ್ಕಾರ ಎಚ್ಚೆತ್ತುಕೊಂಡು ರಾಯಚೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಧಿಕಾರಿಗಳ ಅಂದಾ ದರ್ಬಾರ್ಗೆ ಕಡಿವಾಣ ಹಾಕಲೇಬೇಕಿದೆ.


Spread the love

About Laxminews 24x7

Check Also

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

Spread the love ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ