Breaking News

ಸಾಲಬಾಧೆ : ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು

Spread the love

ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನಿಂದ ವರದಿಯಾಗಿದೆ.

ಇಂಡಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಬಶೀರ ಬುರಾನ ಪಟೇಲ (35) ಎಂದು ಗುರುತಿಸಲಾಗಿದೆ.

ಮೃತ ರೈತ ಇಂಗಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಲಕ್ಷ ರೂ, ಖಾಸಗಿಯಾಗಿ 2 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.

ಮೃತ ರೈತನಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾರೆ. ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ