Breaking News
Home / ರಾಜಕೀಯ / ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ : ಅಭಿಮಾನಿಗಳ ಘೋಷಣೆ

ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ : ಅಭಿಮಾನಿಗಳ ಘೋಷಣೆ

Spread the love

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು..? ಅನ್ನೋ ಚರ್ಚೆ ಆರಂಭವಾಗಿದ್ದು, ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ರೇಸ್ ನಲ್ಲಿರುವ ನಾಯಕರುಗಳ ಅಭಿಮಾನಿಗಳು ತರಹೇವಾರಿ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ.

ಇದಕ್ಕೆ ತಾಜಾ ಉದಾಹರಣೆ ಮೈಸೂರಿನಲ್ಲಿ ನಡೆದಿರುವ ಘಟನೆ. ಹೌದು..! ಸಿದ್ದರಾಮಯ್ಯ ಮುಂದಿನ ಸಿಎಂ ಅಭ್ಯರ್ಥಿ ಎಂದು ಸಿದ್ದು ಅಭಿಮಾನಿಗಳು ಈಗಾಗಲೇ ಫಿಕ್ಸ್ ಆಗಿದ್ದು, ಎಲ್ಲೆಲ್ಲೂ ಅದನ್ನೇ ಹೇಳುತ್ತಿದ್ದಾರೆ.

ಈ ಮಧ್ಯೆ ಇಂದು ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ, ಚಾಮುಂಡೇಶ್ವರಿ ವರಪುತ್ರ ಸಿದ್ದರಾಮಯ್ಯ ಎಂದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೊಸ ಘೋಷಣೆ ಕೂಗಿದ್ದಾರೆ.

ಎರಡು ತಿಂಗಳಿನ ನಂತರ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ರಿಂಗ್ ರಸ್ತೆ ಬಳಿ ಸಿದ್ದರಾಮಯ್ಯರನ್ನು ಸ್ವಾಗತಿಸಲು ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ