Breaking News

ಸಿಎಂಗೆ ಒಂದು ಕಾನೂನ ಜನರಿಗೆ ಒಂದು ಕಾನೂನ ಎಂದು ಸವಾರರ ಅವಾಜ್,ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ B.S.Y.

Spread the love

ನೆಲಮಂಗಲ: ಖಾಸಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗುವ ಮೂಲಕ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಣಿಗಲ್ ರೋಡ್ ನಲ್ಲಿರುವ ರೆಸಾರ್ಟ್ ಗೆ ಭೇಟಿ ನೀಡಿ ಸಿಎಂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಒಂದು ರೂಲ್ಸ್ ರಾಜಕೀಯ ಪ್ರಭಾವಿಗಳಿಗೆ ಒಂದು ರೂಲ್ಸ್ ಎನ್ನುವಂತಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಮದುವೆಗೆ ಕೇವಲ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 40 ಜನರಿಗೆ ಮಾತ್ರ ಅವಕಾಶ ಕೊಟ್ಟ ಸಿಎಂ ಯಡಿಯೂರಪ್ಪರಿಂದಲೇ ರೂಲ್ಸ್ ಬ್ರೇಕ್ ಆಗಿದೆ. ಜನಸಾಮಾನ್ಯರಿಗೆ ಅಧಿಕಾರಿಗಳು ಪೊಲೀಸರು ಫೈನ್ ಹಾಕಿ ತಡೀತಾರೆ, ಆದರೆ ಪ್ರಭಾವಿಗಳಿಗೆ ಅಧಿಕಾರಿಗಳೇ ಭದ್ರತೆ ಒದಗಿಸಿದ್ದಾರೆ. ಇದನ್ನೂ ಓದಿ:

ಮದುವೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯ ಮಹದೇವಪುರದ ಖಾಸಗಿ ರೆಸಾರ್ಟ್ ನಲ್ಲಿ ಮದುವೆ ಆಯೋಜನೆಯಾಗಿತ್ತು. ಶಿವಮೊಗ್ಗದ ಅಗಡಿ ಅಶೋಕ್ ಮಗನ ಮದುವೆ ಮದುವೆಯಲ್ಲಿ ಐನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವಿವಾಹ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿಎಂ ಪ್ರಯಣ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ತಡೆ ನಡೆದಿದ್ದು, ಪೊಲೀಸರ ವಿರುದ್ಧ ವಾಹನ ಸವಾರರ ಗಲಾಟೆ ಮಾಡಿದ್ದಾರೆ. ಸಿಎಂ ಬಂದೋಬಸ್ತ್ ನಲ್ಲಿ ವಾಹನಗಳ ತಡೆ ಸಿಎಂ ಒಂದು ಕಾನೂನ ಜನರಿಗೆ ಒಂದು ಕಾನೂನ ಎಂದು ಸವಾರರು ಅವಾಜ್ ಹಾಕಿದ್ದಾರೆ. ಇತ್ತ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಲ್ ಟ್ರಾಫಿಕ್ ಜಾಮ್ ಆಗಿದ್ದು ನಂತರ ಕ್ಲಿಯರ್ ಆಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ