Breaking News

ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ಅರೆಸ್ಟ್ ಆಗಿದ್ದಾರೆ.

ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ.

ರಾಜಣ್ಣ 8 ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 20ಕ್ಕೂ ಹೆಚ್ಚು ಆಡಿಯೋ ವಶಕ್ಕೆ ಪಡೆದಿದ್ದಾರೆ. ಪ್ರತಿಯೊಂದು ಆಡಿಯೋದಲ್ಲಿ ಸಿಎಂ ಹೆಸರು ಉಲ್ಲೇಖ ಮಾಡಿರೋದು ಪತ್ತೆಯಾಗಿದೆ. ನಿನ್ನೆಯಿಂದ ಆರೋಪಿಯನ್ನು ಟ್ರೇಸ್ ಮಾಡ್ತಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Spread the love ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ