Breaking News

ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

Spread the love

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತೀ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತಾ ದಾಪುಗಾಲು ಇಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಬೆಂಗಳೂರು ನಗರದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ, ಬೆಂಗಳೂರು ಉತ್ತರ ಪೀಣ್ಯ ಘಟಕದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯವನ್ನು ಇನ್ನೂ ಹೆಚ್ಚು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಕೈಗೊಂಡಿರುವ ಕ್ರಾಂತಿಕಾರಿ ಕಾನೂನು ಹಾಗೂ ನೀತಿಗಳು ಫಲ ನೀಡುತ್ತಿವೆ. ಕೊರೊನಾ ಸಂಕಷ್ಟ ಕಾಲದಲ್ಲೂ ಕೂಡಾ ಬಂಡವಾಳ ಹೂಡಿಕೆಯ ಪ್ರಸ್ತಾವನೆಯಲ್ಲಿ ರಾಜ್ಯ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಇದೇ ರೀತಿಯ ಟ್ರೆಂಡ್ ಮುಂದುವರಿದಲ್ಲಿ ನಂ.1 ಸ್ಥಾನ ಪಡೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್…

Spread the love ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ