Home / Uncategorized / ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ.

ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ.

Spread the love

ಉಡುಪಿ, ಜುಲೈ 04; ಕರ್ನಾಟಕ ಸರ್ಕಾರ ಜುಲೈ 5ರಿಂದ ಅನ್ವಯವಾಗುವಂತೆ ಅನ್‌ಲಾಕ್ ಮಾರ್ಗಸೂಚಿ ಪ್ರಕಟಿಸಿದೆ. ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಅದರಲ್ಲೂ ಭಕ್ತರಿಗಂತೂ ದೇವಾಲಯದ ಬಾಗಿಲು ತೆರೆದಿರೋದು ಖುಷಿಯನ್ನು ಇಮ್ಮಡಿಗೊಳಿಸಿದೆ. ಆದರೆ ಉಡುಪಿಯ ಶ್ರೀ ಕೃಷ್ಣನನ್ನು ಕಾಣಲು ಇನ್ನೂ ಒಂದು ವಾರ ಕಾಯಲೇಬೇಕಿದೆ.

ಉಡುಪಿಯ ಕೃಷ್ಣಮಠ ಇನ್ನೂ ಒಂದು ವಾರಗಳ ಕಾಲ ತೆರೆಯುವುದಿಲ್ಲ ಎಂದು ಪರ್ಯಾಯ ಅದಮಾರು ಈಶಪ್ರೀಯ ತೀರ್ಥ ಸ್ವಾಮಿಜಿ ಹೇಳಿದ್ದಾರೆ. ಒಂದುವಾರ ಕೃಷ್ಣ ಮಠ ಭಕ್ತರಿಗೆ ತೆರೆಯೋದಿಲ್ಲ. ವಾರದ ನಂತರ ಭಕ್ತರಿಗೆ ದೇವರ ದರ್ಶನ ವ್ಯವಸ್ಥೆ ಮಾಡುತ್ತೇವೆ. ರಾಜ್ಯದ ಚಿತ್ರಣ ನೋಡಿಕೊಂಡು ಆನಂತರ ನಿರ್ಧರಿಸುತ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಅನ್‌ಲಾಕ್ 3.0ಗೆ ಸರ್ಕಾರ ಹಸಿರು ನಿಶಾನೆ ತೋರಿಸುತ್ತಿದ್ದಂತೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲೂ ಶುಚಿಕಾರ್ಯ ಆರಂಭವಾಗಿದೆ.‌ ಆದರೆ ಉಡುಪಿಯ ಶ್ರೀ ಕೃಷ್ಣ ಮಾತ್ರ ಒಂದು ವಾರಗಳ ಕಾಲ ತಡವಾಗಿ ದರ್ಶನ ನೀಡೋದು ಭಕ್ತರಿಗೆ ನಿರಾಸೆ ಮೂಡಿಸಿದೆ.

ಸರ್ಕಾರ ದೇವಾಲಯಗಳ ಬಾಗಿಲು ತೆರೆಯಲು ಅವಕಾಶ ನೀಡಿದೆ.
ಆದರೆ ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ಅನ್‌ಲಾಕ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, “ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ” ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಗಡಿಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ತತ್ತರಿಸಿದ ಬಾಳೆ ಬೆಳೆಗಾರರು

Spread the loveಚಾಮರಾಜನಗರ, ಮೇ, 12: ಗಡಿಜಿಲ್ಲೆ ಚಾಮರಾಜನಗರದಲ್ಲಿ ಸುರಿದ ಮಳೆಗೆ ಜನರು ಹರ್ಷಗೊಂಡಿದ್ದರೆ, ಬಾಳೆ ಬೆಳೆಗಾರರು ಮಾತ್ರ ಕಣ್ಣೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ