Breaking News

ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.

Spread the love

ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯ‍ರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿವಾಶ ಯರಗೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ