Breaking News

ಮಾಜಿ ಸಚಿವ ಪರಮೇಶ್ವರ ನಾಯ್ಕ ಸಹೋದರನ ಬಂಧನ

Spread the love

ವಿಜಯನಗರ, ಜುಲೈ 04; ಮಾಜಿ ಸಚಿವ, ಹೂವಿನಹಡಗಲಿ ಶಾಸಕ‌ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ. ಟಿ. ​ಪರಮೇಶ್ವರ ನಾಯ್ಕ ಸಹೋದರ ಪಿ. ಟಿ. ಶಿವಾಜಿ ನಾಯ್ಕ ಬಂಧಿಸಲಾಗಿದೆ. ವೃದ್ಧನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಜೂನ್ 29ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀಪುರ ತಾಂಡದಲ್ಲಿ ಮನೆಯ ಜಾಗದ ಕ್ಷುಲ್ಲಕ ವಿಚಾರವಾಗಿ ಶರಣ ನಾಯ್ಕ ಮೇಲೆ ಪಿ. ಟಿ. ಶಿವಾಜಿ ನಾಯ್ಕ ಹಲ್ಲೆ ಮಾಡಿದ್ದರು.

 

ಹಲ್ಲೆಯಿಂದಾಗಿ ಗಾಯಗೊಂಡಿದ್ದ ಶರಣ ನಾಯ್ಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಾಣಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಹಲ್ಲೆಗೊಳಗಾದ ಶರಣಾ ನಾಯ್ಕ​ ಸಂಬಂಧಿಕರಾದ ಶ್ರೀದೇವಿ ಎಂಬುವರು ದೂರು ದಾಖಲಿಸಿದ್ದರು.

 

ದೂರು ದಾಖಲಿಸದ ನಂತರ ಅರಸೀಕೆರೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಐಪಿಸಿ ಸೆಕ್ಷನ್ 323, 324, 504, 506, 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

 

ಶಾಸಕ ಪಿ. ಟಿ. ಪರಮೇಶ್ವರ್ ನಾಯ್ಕ ಸಹೋದರ ಶಿವಾಜಿ ನಾಯ್ಕ ಹಲ್ಲೆ ಸಹೋದರ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ. ದೂರು, ಪ್ರತಿ ದೂರು ದಾಖಲಾದ ಹಿನ್ನಲೆಯಲ್ಲಿ ಎರಡು ಕಡೆಯವರನ್ನು ಪೊಲೀಸರು ಬಂಧಿಸಿದ್ದಾರೆ.

ಪಿ. ಟಿ. ಶಿವಾಜಿ ನಾಯ್ಕ ಆತನ ಪತ್ನಿ ಕುಮಾರಿ ಬಾಯಿ, ಮಗ ರಾಹುಲ್ ಬಂಧಿಸಲಾಗಿದೆ. ಇತ್ತ ಹಲ್ಲೆಗೊಳಗಾದ ಜಗದೀಶ್, ಆತನ ಪತ್ನಿ ಶ್ರೀದೇವಿ, ಜಗದೀಶ್ ಅಣ್ಣ ಶಿವಕುಮಾರ್ ಬಂಧಿಸಲಾಗಿದೆ. ನಿನ್ನೆ ಪ್ರತಿ ದೂರು ದಾಖಲಾಗುತ್ತಿದ್ದಂತೆ 6 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಜೈಲಿಗೆ ಸ್ಥಳಾಂತರಿಸಿದರು.


Spread the love

About Laxminews 24x7

Check Also

ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ

Spread the love ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ ಮಳೆಯ ಅಬ್ಬರಕ್ಕೆ ಖಾನಾಪೂರ ಪಟ್ಟಣದ ಮನೆಯೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ