Breaking News

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನಿರಾಣಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್‌ ಶಾ ಅವರೊಂದಿಗೆ ಮುರುಗೇಶ್‌ ನಿರಾಣಿ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದು, ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡುವ ವಿಚಾರದಲ್ಲಿ ಅಮಿತ್‌ ಶಾ ಮುರುಗೇಶ್‌ ನಿರಾಣಿ ಅವರ ಪರ ಒಲವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ, ಸಚಿವ ಮರುಗೇಶ್‌ ನಿರಾಣಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ತಾವು ವಯಕ್ತಿಕ ಕಾರಣಕ್ಕೆ ದೆಹಲಿಗೆ ಆಗಮಿಸಿದ್ದು, ಯಾವುದೇ ನಾಯಕರ ಭೇಟಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರ ಆಪ್ತ ಮೂಲಗಳ ಪ್ರಕಾರ ಸಂಜೆ ಪಕ್ಷದ ಹೈಕಮಾಂಡ್‌ ನಾಯಕರಾದ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ