Breaking News
Home / ರಾಜಕೀಯ / ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

Spread the love

ವಿಜಯನಗರ: ನಿನ್ನೆ ಸುರಿದ ಭಾರೀ ಮಳೆಗೆ ಗಂಡ ಹೆಂಡತಿಯಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ.

ಹಗರಿ ಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಮೊತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಹಾಗೂ ಅವರ ಪತ್ನಿ ಗದಗ ಜಿಲ್ಲೆಯಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಬಳಿ ಇರುವ ಹಳ್ಳದಲ್ಲಿ ನಿನ್ನೆ ದಂಪತಿ ಕೊಚ್ಚಿಹೋಗಿದ್ದು, ಮಲ್ಲಿಕಾರ್ಜುನ ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಹಳ್ಳದ ದಡದಲ್ಲಿ ಬೈಕ್​ ಪತ್ತೆಯಾದ ವೇಳೆ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿರುವ ವಿಚಾರ ಬೆಳಕಿಗೆ ಬಂದಿದೆ. ಇಂದು ಮಲ್ಲಿಕಾರ್ಜುನ ಅವರ ಮೃತ ದೇಹ ಪತ್ತೆಯಾಗಿದ್ದು, ಪತ್ನಿಗಾಗಿ ಹುಡುಕಾಟ ಮುಂದುವರಿದಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ