Breaking News

ರಾತ್ರಿ ಸುರಿದ ಧಾರಾಕಾರ ಮಳೆಪಪ್ಪಾಯಿ, ದಾಳಿಂಬೆ ಗಿಡ ಬೆಳೆದಿದ್ದ ರೈತ ಕಂಗಾಲು

Spread the love

ವಿಜಯನಗರ: ಜಿಲ್ಲೆಯಾದ್ಯಂತ ನಿನ್ನೆ ಭರ್ಜರಿ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಸಂಪೂರ್ಣ ಜಲಾವೃತಗೊಂಡಿದ್ದು ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ.

 

 

ಅವೈಜ್ಞಾನಿಕ ಕೃಷಿ ಹೊಂಡದಿಂದಲೇ ಬೆಳೆ ನಾಶ
ಬಿಟ್ಟು ಬಿಡದೇ ಸುರಿದ ಮಳೆಯಿಂದ ಜಾತಪ್ಪ ಎಂಬ ರೈತನ ಜಮೀನು ಜಲಾವೃತಗೊಂಡಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಪಪ್ಪಾಯಿ, ದಾಳಿಂಬೆ ಗಿಡಗಳು ನೆಲಕಚ್ಚಿ ರೈತನನ್ನು ಸಂಕಷ್ಟಕ್ಕೆ ತಳ್ಳಿದೆ. ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೊಂಡದಿಂದ ನೀರು ನುಗ್ಗಿದ್ದು, ಈ ಅವೈಜ್ಞಾನಿಕ ಕೃಷಿ ಹೊಂಡದಿಂದಲೇ ನಮ್ಮ ಬೆಳೆ ನಾಶವಾಗಿದೆ ಎಂದು ರೈತ ಕೃಷಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾನೆ.

ಬೆಳೆ ನೋಡಿ ಪ್ರಾಣವನ್ನ ಹೇಗೆ ಇಟ್ಟುಕೊಳ್ಳಬೇಕು. ಬಡವ ಸ್ವಾಮಿ ನಾನು.. ಇಷ್ಟೊಂದು ಮಳೆ ನೀರು ನುಗ್ಗಿದ್ರೆ ಯಾವ ಬೆಳೆ ತಡೆಯುತ್ತೆ? ಏನಾದರೂ ಕೇಳಿದ್ರೆ ದೌರ್ಜನ್ಯ ಮಾಡ್ತಿದ್ದಾರೆ ಅಂತಾರೆ ಎಂದು ಕೃಷಿ ಅಧಿಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

 

ಹೂವಿನ ಹಡಗಲಿಯ ಕೆಇಬಿ ಕಾಲೋನಿಗೆ ನುಗ್ಗಿದ ನೀರು ಮನೆಗಳಿಗೆ ನುಗ್ಗಿದೆ. ಇತ್ತ ನೀರು ಹೊರ ಹಾಕಲು ಆಗದೇ ನಿದ್ದೆಯೂ ಮಾಡಲು ಬಿಡದೇ ತೀವ್ರ ಫಜೀತಿ ಸೃಷ್ಟಿಸಿದೆ. ಮಳೆ ನೀರಿನ ಜೊತೆ ಹಳ್ಳದ ನೀರು ಸೇರಿ ಈ ಅವಾಂತರ ಸೃಷ್ಟಿಸಿದ್ದು ನೌಕರರು ಮತ್ತು ಕುಟುಬ ಸದಸ್ಯರು ತಡರಾತ್ರಿ ವರೆಗೆ ಮನೆ ಹೊರಗೆ ಕಾಲ ಕಳೆದಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರೆಣೆ ನಡೆಸಿ ಮಳೆ ನೀರನ್ನು ಮನೆಯಿಂದ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ