Breaking News

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧಿಸಿದ ಸಿಬಿಐ

Spread the love

ಧಾರವಾಡ, ಜು.08: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆಗೆ ಬರಲಿದೆ. ವಿಚಾರಣೆಗೂ ಮುನ್ನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಗದಗನಲ್ಲಿ ಬಂಧಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದಾರೆ. ಯೋಗೀಶ್ ಗೌಡ ಕೊಲೆ ಸಂಗತಿ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರಿಗೆ ಗೊತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಅನೇಕ ಸಲ ವಿಚಾರಣೆಗೆ ಒಳಪಡಿಸಿದ್ದರು. ಈ ಪ್ರಕರಣದಲ್ಲಿ ವಿನಯ್ ಕಲುಕರ್ಣಿ ಎಫ್‌ಐಆರ್ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇದರ ನಡುವೆ ಸೋಮು ನ್ಯಾಮಗೌಡ ಅವರನ್ನು ಬಂಧಿಸಿ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬಂಧಿತ ಆರೋಪಿತ ಅಧಿಕಾರಿಯನ್ನು ಧಾರವಾಡ ಉಪನಗರ ಠಾಣೆಗೆ ಗುರುವಾರ ಬೆಳಗ್ಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ