Breaking News

ಬಾಗಲಕೋಟೆಯಲ್ಲಿ ಭಾರೀ ಮಳೆ.. ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆದ ಜನ

Spread the love

ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆ ನೀರು ಕುಳಗೇರಿ ಕ್ರಾಸ್​​ನಲ್ಲಿರುವ ನಾಲ್ಕೈದು‌ ಮನೆಗಳಿಗೆ ನುಗ್ಗಿದೆ. ಅಸ್ಲಮ್‌ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು‌ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ ಚರಂಡಿ ನೀರು ಮನೆಗೆ ನುಗ್ಗುತ್ತೆ. ಈ ಬಗ್ಗೆ ಗ್ರಾಪಂ ಸಿಬ್ಬಂದಿಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಅಂತಾ ನಿವಾಸಿಗಳು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ