Breaking News

ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ, ರೋಗ ಬರಲ್ಲ : ದಾವಣಗೆರೆ ಸಂಸದ

Spread the love

ದಾವಣಗೆರೆ: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ. ರೋಗ ಬರಲ್ಲ! ಇದು ದಾವಣಗೆರೆಯ ಬಿಜೆಪಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರೀತಿ.

ದಿನದಿಂದ ದಿನಕ್ಕೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಾಗುತ್ತಿದ್ದು ಜನರು ಸೈಕಲ್ ಮೇಲೆ ಓಡಾಡುವ ಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಂಸದರು, ಸೈಕಲ್‌ನಲ್ಲಿ ಓಡಾಡಿದರೆ ಏನ್ ಆಗುತ್ತೆ, ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಲಘುವಾಗಿ ಉತ್ತರಿಸಿದರು.

ಬಳಿಕ ಮಾತನಾಡಿದ ಅವರು ಕಚ್ಚಾ ತೈಲದ ಬ್ಯಾರೆಲ್ ಬೆಲೆ ಜಾಸ್ತಿ ಆದಾಗ ದರ ಹೆಚ್ಚಾಗುವುದು ಸ್ವಾಭಾವಿಕ. ಬ್ಯಾರೆಲ್ ಬೆಲೆ ಕಡಿಮೆಯಾದಾಗ ಕಡಿಮೆ ಆಗುತ್ತೆ. ಕೋವಿಡ್ ಕಡಿಮೆಯಾದ ಮೇಲೆ ಪೆಟ್ರೋಲ್-ಡಿಸೇಲ್ ದರವೂ ಕಡಿಮೆಯಾಗುತ್ತೆ. ದರ ಕಡಿಮೆ ಮಾಡಲು ಪ್ರಧಾನಿ ಮೋದಿಯವರು ಸರ್ವ ಪ್ರಯತ್ನ ಮಾಡುತ್ತಾರೆ ಎಂದರು.

ಇದನ್ನೂ ಓದಿ :ಕೆಆರ್‌ಎಸ್‌ ಬಗ್ಗೆ ಮಾತನಾಡುವಾಗ ಸುಮಲತಾಗೆ ಎಚ್ಚರವಿರಲಿ: ಸಾರಾ

ರಾಜ್ಯಕ್ಕೆ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗದೆ ಇರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ಅದನ್ನು ಹಣಕಾಸು ಸಚಿವರಿಗೆ ಕೇಳಬೇಕು. ರಾಜ್ಯಕ್ಕೆ ಬೇಕಾದದ್ದನ್ನು ರಾಜ್ಯದಲ್ಲಿರುವ ನಾಲ್ವರು ಸಚಿವರಿಗೆ ಕೇಳುತ್ತಾರೆ ಎಂದರು ಪ್ರತಿಕ್ರಿಯಿಸಿದರು


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ