Breaking News
Home / Uncategorized / ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

Spread the love

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ.

ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ನಾಳೆ ಸಂಜೆ 6ಗಂಟೆಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ