ಬೆಳಗಾವಿ: ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ ಬಡ ಜನರಿಗೆ ವಿತರಿಸಲು ಮುಂದಾಗಿದ್ದಾರೆ.
ಕೊರೋನಾ ಸಂಕಷ್ಟದ ಸ್ಥತಿಯಲ್ಲಿರೈತರು ಬೆಳೆದ ತರಕಾರಿಗಳನ್ನು ಖರೀದಿಸಲು ಯಾರೂ ಮುಂದಾಗದೆ ಇರುವ ಕಾರಣ ಮತ್ತು ಬೇರೆ ರಾಜ್ಯಗಳಿಗೆ ಕಳುಹಿಸಲು ಕೂಡ ಅವಕಾಶ ಇಲ್ಲದ ಕಾರಣ ಶಾಸಕರು ಖುದ್ದಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಯೋಗ್ಯ ಬೆಲೆಯಲ್ಲಿ ತರಕಾರಿ ಖರೀದಿಸಿ ಜನರಿಗೆ ವಿತರಿಸುವ ಕಾರ್ಯ ಮಾಡಿದ್ದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಯಮಕನಮರಡಿ ಮತಕ್ಷೇತ್ರದ ಕಡೋಲಿಯಲ್ಲಿ ರೈತರ ತರಕಾರಿಗಳನ್ನು ಜನರಿಗೆ ವಿರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರು ಆತಂಕಕ್ಕೆ ಒಳಪಡಬಾರದು ಎಂದು ಅಭಯ ಹಸ್ತ ನೀಡಿರುವ ಅವರು ಮಾನವೀಯ ದೃಷ್ಟಿಯಿಂದ ನೀಡುವ ರೈತರ ತರಕಾರಿಗಳನ್ನು ಕೂಡ ಜನರಿಗೆ ತಲುಪಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಆನಂದ ಪಾಟೀಲ, ಜಿ.ಪಂ. ಸದಸ್ಯ ಸಿದ್ದು ಸುಣಗಾರ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಸೇರಿ ಗಣ್ಯರು ಇದ್ದರು.