Breaking News
Home / ರಾಜಕೀಯ / ಪೆಟ್ರೋಲ್ ಬೆಲೆ ಏರಿಕೆ ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ: ಸಚಿವ ನಿತಿನ್ ಗಡ್ಕರಿ

ಪೆಟ್ರೋಲ್ ಬೆಲೆ ಏರಿಕೆ ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ: ಸಚಿವ ನಿತಿನ್ ಗಡ್ಕರಿ

Spread the love

ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆ ದೇಶಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ(ಜುಲೈ11) ನಾಗ್ಪುರದಲ್ಲಿ ದೇಶದ ಮೊದಲ ಖಾಸಗಿ ಎಲ್ ಎನ್ ಜಿ(ನೈಸರ್ಗಿಕ ಅನಿಲ) ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

 

ಪೆಟ್ರೋಲ್ ಬೆಲೆ ಏರಿಕೆಯಿಂದ ದೇಶಕ್ಕೆ ದೊಡ್ಡ ಸಮಸ್ಯೆಯನ್ನು ತಂದೊಡ್ಡಿದೆ. ಇದರಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಗ್ರಾಹಕರು ಇನ್ನು ಪೆಟ್ರೋಲ್ ಬಂಕ್ ಬೇಕೋ ಅಥವಾ ಎಥಾನಾಲ್ (ನೈಸರ್ಗಿಕ ಅನಿಲ) ಬೇಕೋ ಎಂಬ ಆಯ್ಕೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದು ಗಡ್ಕರಿ ಸಲಹೆ ನೀಡಿದರು.

ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 110 ರೂಪಾಯಿಗೆ ಏರಿಕೆಯಾಗಿದೆ, ಆದರೆ ಎಥಾನಾಲ್ ಪ್ರತಿ ಲೀಟರ್ ಬೆಲೆ 60 ರೂಪಾಯಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಸೋಮವಾರ (ಜುಲೈ 12) ಪೆಟ್ರೋಲ್ ದರ 25ರಿಂದ 35 ಪೈಸೆಯಷ್ಟು ಏರಿಕೆಯಾದ ಪರಿಣಾಮ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.23 ರೂಪಾಯಿಗೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.39 ರೂಪಾಯಿಗೆ ಏರಿಕೆಯಾದ ಹಿನ್ನೆಲೆಯಲ್ಲಿ ಗಡ್ಕರಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the loveಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ